ದಾಖಲೆ ಸಮೇತ ಮಾಧ್ಯಮದ ಮುಂದೆ ಬರುತ್ತೇನೆ: ಭೂ ಒತ್ತುವರಿ ಆರೋಪಕ್ಕೆ ನಿಖಿಲ್ ತಿರುಗೇಟು
ಕುಮಾರಸ್ವಾಮಿ ಅವರು ಸಿಎಂ ಆದಾಗ ಎಷ್ಟೋ ಜನರಿಗೆ ಸಾಗುವಳಿ ಚೀಟಿಯನ್ನ ಕೊಡಿಸಿದ್ದಾರೆ. ಎರಡು ಬಾರಿ ಸಿಎಂ ಆಗಿದ್ರು. ತಪ್ಪಿದ್ದರೆ ಆಗ ಸರಿ ಮಾಡಿಸಿಕೊಳ್ಳಬಹುದಿತ್ತು. ಆದರೆ ಅದನ್ನ ಮಾಡಿಲ್ಲ. ಇದೀಗ ನೋಟಿಸ್ ಕೊಡದೆ ತೆರವು ಮಾಡುತ್ತೇವೆ ಎಂದು ಅದು ಕಾನೂನುಬಾಹಿರ. ಡಿಸಿ ಅವರು 14 ಎಕರೆ ಜಮೀನು ಒತ್ತುವರಿ ಆಗಿದೆ ಎನ್ನುತ್ತಾರೆ. ಯಾವ 14 ಎಕರೆ ಒತ್ತುವರಿ ಆಗಿದೆ ಎಂದು ಪ್ರಶ್ನಿಸಿದರು.