ನಾನು ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಸ್ಪರ್ಧೆ ಮಾಡುವೆ: ಶಾಮನೂರು ಶಿವಶಂಕರಪ್ಪ

Sampriya

ಬುಧವಾರ, 11 ಸೆಪ್ಟಂಬರ್ 2024 (19:32 IST)
Photo Courtesy X
ದಾವಣಗೆರೆ: ಸದ್ಯ ಮುಖಮಂತ್ರಿ ಸ್ಥಾನ ಖಾಲಿ ಇಲ್ಲ ಎಂದಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಬದಲಾವಣೆಯಾಗುವ ಪ್ರಸಂಗ ಬಂದಲ್ಲಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ನಾನೂ ಸ್ಪರ್ಧೆ ಮಾಡುವೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್‌ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅಧಿಕಾರಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಅವರ ಅಧಿಕಾರವಧಿ ಮುಗಿದ ಬಳಿಕ ಪಕ್ಷ ತೀರ್ಮಾನಿಸುತ್ತದೆ. ಹೈಕಮಾಂಡ್‌ ಹಾಗೂ ಪಕ್ಷದ ಶಾಸಕರು ಯಾರ ಬಗ್ಗೆ ಒಲವು ತೋರುತ್ತಾರೊ ಅವರಿಗೆ ಅದೃಷ್ಟ ಒಲಿಯುತ್ತದೆ. ಅವಕಾಶ ಸಿಕ್ಕರೆ ಲಿಂಗಾಯತರು ಸಿದ್ಧರಿದ್ದೇವೆ ಎಂದರು.

ಇನ್ನೂ ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಹುರುಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂಬ ವಿಶ್ವಾಸವಿದೆ. ಈ ಹುದ್ದೆಯ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದರಲ್ಲಿ ಪ್ರಯೋಜನವಿಲ್ಲ. ಇದರಿಂದ ಸಚಿವರ ಘನತೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ