ರಾಮನಗರದ ಬಿಡದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿ ಭಾಷೆಯಲ್ಲಿ ಗಾಂಡೂ ಎಂದರೆ ಕೈಲಾಗದವರು ಎಂದರ್ಥ. ಯಾವುದೋ ಕಾರಣಕ್ಕೆ ಕಲ್ಲಪ್ಪ ಹಂಡಿಭಾಗ್ ಅವರು ಆತ್ಮಹತ್ಯೆಗೆ ಶರಣಾಗಿರುವುದು ಸರಿಯಲ್ಲ ಎಂದು ತಮ್ಮ ಉದ್ದಟತನದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಕಲ್ಲಪ್ಪ ಹಂಡಿಭಾಗ್ ಅವರ ತಂದೆ ತಾಯಿ, ಅವರನ್ನು ಕಷ್ಟಪಟ್ಟು ವಿದ್ಯಾಭ್ಯಾಸ ನೀಡಿ, ಅವರನ್ನು ಉನ್ನತ್ತ ಅಧಿಕಾರಿಯನ್ನಾಗಿ ಮಾಡಿದ್ದರು. ಆದರೆ, ಅವರ ಪೋಷಕರ ಕುರಿತು ಯೋಜನೆ ಮಾಡದೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೀಗಾಗಿ ನಾನು ಗಾಂಡೂ ಪದ ಬಳಕೆ ಮಾಡಿದ್ದೇನೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಸ್ಪಷ್ಟನೆ ನೀಡಿದ್ದಾರೆ.