ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸುವೆ: ಕುಮಾರಸ್ವಾಮಿ

ಗುರುವಾರ, 25 ಮೇ 2017 (17:16 IST)
ಜೆಡಿಎಸ್ ಪಕ್ಷದಲ್ಲಿ ನನ್ನನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದ ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡರಿಗೆ ದೂರು ನೀಡುವುದಾದರೇ ನೀಡಲಿ.ಆದರೆ, ಜಿ.ಟಿ.ದೇವೇಗೌಡರನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಚರ್ಚಿಸುತ್ತೇನೆ. ಈಗಾಗಲೇ ಸಾ.ರಾ.ಮಹೇಶ್ ಕೂಡಾ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.  
 
ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಲ ವಿದ್ಯಮಾನಗಳು ಕೆಲವರಿಗೆ ಪೂರಕವಾಗಿದ್ದರೆ ಕೆಲವರಿಗೆ ವಿರೋಧವಾಗಿವೆ. ನಮ್ಮ ಕುಟುಂಬದಿಂದ ಕೇವಲ ನಾನು ಮತ್ತು ರೇವಣ್ಣ ಮಾತ್ರ ಚುನಾವಣೆ ಕಣಕ್ಕಿಳಿಯಲಿದ್ದೇವೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷದಲ್ಲಿ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣಲಾಗುತ್ತದೆ. ಆದರೆ, ಕೆಲವು ಬಾರಿ ಸಂಪರ್ಕ ಕೊರತೆಯಿಂದಾಗಿ ಭಿನ್ನಾಭಿಪ್ರಾಯಗಳು ಎದುರಾಗುತ್ತವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ