ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಸದನದಲ್ಲಿ ತಕ್ಕ ಉತ್ತರ ಕೊಡುತ್ತೇನೆ : ಸಿಎಂ

ಸೋಮವಾರ, 13 ಸೆಪ್ಟಂಬರ್ 2021 (13:56 IST)
ಬೆಂಗಳೂರು,ಸೆ13 : ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ತಕ್ಕ ಉತ್ತರ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಸದನಕ್ಕೆ ಬರಲಿ. ಸದನದಲ್ಲೇ ಅವರಿಗೆ ಸೂಕ್ತ ಉತ್ತರವನ್ನು ನೀಡುವುದಾಗಿ ಹೇಳಿದರು.

ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಮುಖಂಡರು ಪೆಟ್ರೋಲ್, ಡೀಸೆಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎತ್ತಿನಗಾಡಿಯಲ್ಲಿ ರ್ಯಾಲಿ ನಡೆಸಿದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದಾಗ ಇದೇ ರೀತಿ ಅವರು ಪ್ರತಿಭಟನೆ ಮಾಡಬೇಕಿತ್ತು. ಆಗ ಸುಮ್ಮನ್ನಿದ್ದು ಈಗ ಹೋರಾಟ ಮಾಡುತ್ತಿದ್ದಾರೆ.
ಅವರ ಆರೋಪಕ್ಕೆ ತಕ್ಕ ಉತ್ತರವನ್ನು ಸದನದಲ್ಲಿ ನೀಡುವುದಾಗಿ ಹೇಳಿದರು. ಯಾದಗಿರಿ ಮಹಿಳೆ ಮೇಲಿನ ದೌರ್ಜನ್ಯ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಲು ಮುಖ್ಯಮಂತ್ರಿ ನಿರಾಕರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ