ಕಾಂಗ್ರೆಸ್ ಪಕ್ಷಕ್ಕೆ ದೊಡ್ಡದೊಂದು ಗುಡ್‌ಬೈ: ಎ.ಬಿ.ಮಲಕರೆಡ್ಡಿ

ಮಂಗಳವಾರ, 14 ನವೆಂಬರ್ 2017 (14:26 IST)
ನಾನು ಕಾಂಗ್ರೆಸ್ ಪಕ್ಷ ಬಿಡುತ್ತೇನೆ. ಆದರೆ, ಬೇರೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಶಾಸಕ ಡಾ. ಎ.ಬಿ.ಮಲಕರೆಡ್ಡಿ ನೇರವಾಗಿ ಹೇಳಿರುವುದು ಕಂಡು ಸಿಎಂ ಕಕ್ಕಾಬಿಕ್ಕಿಯಾದರು ಎಂದು ಮೂಲಗಳು ತಿಳಿಸಿವೆ.
ಮಲಕರೆಡ್ಡಿ ಹೇಳಿಕೆಯಿಂದ ಆಘಾತಗೊಂಡ ಸಿಎಂ, ನಿಮ್ಮ ಆರೋಗ್ಯ ಚೆನ್ನಾಗಿದೆ ನೀವು ಇನ್ನು ಎರಡು ಬಾರಿ ಶಾಸಕರಾಗಬಹುದು ಎಂದು ಮನವೊಲಿಸುವ ಪ್ರಯತ್ನ ಮಾಡಿದರು ಎನ್ನಲಾಗಿದೆ.
 
ಆದರೆ, ತಮ್ಮ ತೀರ್ಮಾನಕ್ಕೆ ಬದ್ಧರಾಗಿರುವಂತೆ ಕಂಡು ಬಂದ ಶಾಸಕ ಮಲಕ ರೆಡ್ಡಿ, ಸರ್ ನಾನು 6 ಬಾರಿ ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ. ಒಂದು ಅವಧಿಗೆ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಇನ್ನೇನಾಗಬೇಕು ಸರ್ ಎಂದು ತಿಳಿಸಿದ್ದಾರೆ.
 
ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.
 
ಬೆಳಗಾವಿಯ ಸುವರ್ಣಸೌಧದಲ್ಲಿ ಉಭಯ ನಾಯಕರು ಮಾತನಾಡಿದ ನಂತರ ಸಿಎಂ ಸಿದ್ದರಾಮಯ್ಯ, ಮತ್ತೆ ನಾನು ನಿಮ್ಮೊಂದಿಗೆ ಮಾತನಾಡುತ್ತೇನೆ ಎಂದು ಹೇಳಿ ಹೊರಟುಹೋದ ಘಟನೆ ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ