ಈ ರಾಜ್ಯದ ಜನರ ಋಣ ತೀರಿಸುವೆ : ಕುಮಾರಸ್ವಾಮಿ

ಭಾನುವಾರ, 12 ಫೆಬ್ರವರಿ 2023 (15:00 IST)
ಚಿಕ್ಕೋಡಿ : ಒಂದು ಬಾರಿ ಜೆಡಿಎಸ್ಗೆ ಬಹುಮತ ನೀಡಿ, ಈ ರಾಜ್ಯದ ಜನರ ಋಣ ತೀರಿಸುವ ಕೆಲಸ ಮಾಡುವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಶಪಥ ಮಾಡಿದರು.

ಬೆಳಗಾವಿ ಜಿಲ್ಲೆಯ ಕುಡಚಿ ವಿಧಾನಸಭಾ ಕ್ಷೇತ್ರದ ಕುರುಬಗೋಡಿ ಗ್ರಾಮದಲ್ಲಿ ನಡೆದ ಜೆಡಿಎಸ್ ಸಮಾವೇಶದಲ್ಲಿ ಅವರು ಮಾತನಾಡಿದರು.

ಜೆಡಿಎಸ್ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ 1 ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡುತ್ತೇವೆ. ಯಾವುದೇ ಖಾಸಗಿ ಶಾಲೆಗಳಿಗೂ ಕಡಿಮೆಯಿಲ್ಲದಂತೆ ಸರ್ಕಾರಿ ಶಾಲೆಗಳನ್ನ ಅಭಿವೃದ್ಧಿ ಮಾಡ್ತೇವೆ.

ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾದ್ರೆ, ಸರ್ಕಾರದಿಂದಲೇ ಆಸ್ಪತ್ರೆ ಬಿಲ್ ಪಾವತಿಸುವ ಕೆಲಸ ಮಾಡ್ತೇವೆ ಎಂದು ಭರವಸೆ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ