ಸಂಪುಟ ಪುನಾರಚನೆ ಸಂದರ್ಭದಲ್ಲಿ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲವೆಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಖರ್ಗೆಯವರ ಸಲಹೆಯಂತೆ ನನಗೆ ಸಚಿವ ಸ್ಥಾನದಿಂದ ಕೊಕ್ ನೀಡಿದ್ದಾರೆ ಎಂದು ಮಾಜಿ ಸಚಿವ ಖಮರುಲ್ ಇಸ್ಲಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಪುಟ ಪುನಾರಚನೆ ಸಂದರ್ಭದಲ್ಲಿ ನವದೆಹಲಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿ ಮಾಡಿದ್ದಾಗ ಸಚಿವ ಸ್ಥಾನದಿಂದ ಕೈಬಿಡುವುದಿಲ್ಲ ಎಂದು ನನಗೆ ಭರವಸೆ ನೀಡಿದ್ದರು. ಆದರೆ, ಯಾವುದೇ ಸುಳಿವು ನೀಡದೆ ನನಗೆ ಸಂಪುಟದಿಂದ ಕಿತ್ತುಹಾಕಲಾಗಿದೆ ಎಂದು ಕಿಡಿಕಾರಿದರು.
ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಇಷ್ಟು ವರ್ಷ ನನ್ನನ್ನು ದುಡಿಸಿಕೊಂಡು ಈಗ ನನ್ನನ್ನು ಬೀಸಾಕುತ್ತೀರಾ? ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಚುನಾವಣೆ ಬಂದಾಗ ಮಾತ್ರ ನಾನು ನೆನಪಾಗುತ್ತೇನೆ. ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ನನ್ನ ಅವಶ್ಯಕತೆ ಕಾಣುವುದಿಲ್ಲ ಎಂದು ಮಾಜಿ ಸಚಿವ ಖಮರುಲ್ ಇಸ್ಲಾಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.