ಯಾವ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ: ಕಾಗೋಡು

ಭಾನುವಾರ, 19 ಜೂನ್ 2016 (17:39 IST)
ಯಾವ ಖಾತೆ ಕೊಟ್ಟರು ನಿಭಾಯಿಸುತ್ತೇನೆ.ಸಮಾಜವಾದವನ್ನು ಯಾವತ್ತು ನಾನು ಮರೆಯುವುದಿಲ್ಲ ಎಂದು ಪ್ರಮಾಣ ವಚನ ಸ್ವೀಕರಿಸಿದ ನಂತರ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ದೀರ್ಘಕಾಲದ ನಂತರ ಸಚಿವನಾಗಿದ್ದೇನೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವ ಖಾತೆ ಕೊಟ್ಟರು ಅದಕ್ಕೆ ನ್ಯಾಯ ಒದಗಿಸುವ ವಿಶ್ವಾಸವಿದೆ. ಎಲ್ಲರು ಸೇರಿ ರಾಜ್ಯವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.
 
ವಿಧಾನಸಭಾ ಸಭಾಪತಿಯಾಗಿ ಸರಕಾರಕ್ಕೆ ಚಾಟಿ ಏಟು ಬೀಸುತ್ತಿದ್ದೀರಿ. ಇದೀಗ ಹೊರಬಂದು ಸರಕಾರದಲ್ಲಿ ಮಂತ್ರಿಯಾಗಿದ್ದೀರಿ. ಈಗಲೂ ಸರಕಾರಕ್ಕೆ ಚಾಟಿ ಬೀಸುತ್ತೀರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನನ್ನ ಸಮಾಜವಾದ ಯಾವುದೇ ಕಾಲದಲೂ ಪ್ರಸ್ತುತವಾಗಿದೆ ಎಂದರು.
 
ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಬೇಕು ಎನ್ನುವ ಮಹಾದಾಸೆ ಹೊಂದಿದ್ದೇನೆ. ಅದರಂತೆ, ಸಚಿವನಾಗಿ ಉತ್ತಮ ಸೇವೆ ಸಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ನೂತನ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ