ಅಯ್ಯೋ… ಸುಳ್ಳು ದೂರಿಗೆಲ್ಲಾ ಹೆದರಕ್ಕಾಗುತ್ತಾ?: ಸಿಎಂ ಸಿದ್ದರಾಮಯ್ಯ
ಐಟಿಯವರು ತನಿಖೆ ನಡೆಸಲಿ ಆಮೇಲೆ ನೋಡೋಣ ಏನಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆರ್ ಟಿಐ ಕಾರ್ಯಕರ್ತ ರಾಮಮೂರ್ತಿ ಮುಖ್ಯಮಂತ್ರಿ ನೂರಾರು ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ್ದಾರೆಂದು 1638 ಪುಟಗಳ ವರದಿಯನ್ನು ಐಟಿ ಇಲಾಖೆಗೆ ಸಲ್ಲಿಸಿದ್ದರು.
ಇದಕ್ಕೆ ಸ್ಪಂದಿಸಿರುವ ಐಟಿ ಇಲಾಖೆ ಸಿಎಂ ವಿರುದ್ಧ ತನಿಖೆಗೆ ಮುಂದಾಗಿದೆ. ಇದರ ಬಗ್ಗೆ ಐಟಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.