ಈಶ್ವರಪ್ಪ ಬ್ರಿಗೇಡ್ ಸಭೆಗೆ ಹೋಗುವುದು ಸರಿಯಲ್ಲ.ಇಲ್ಲಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವಾಗ ಇನ್ನೆಲ್ಲೋ ಬ್ರಿಗೇಡ್ ಸಮಾವೇಶದಲ್ಲಿ ಪಾಲ್ಗೊಂಡ್ರೆ ತಪ್ಪು ಸಂದೇಶ ಹೋಗುತ್ತೆ. ಅವರಿಗೆ ಯಾವ ಸಂದೇಶವನ್ನು ನೀಡಬೇಕಿತ್ತೋ ಅದನ್ನು ನಿನ್ನೆ ನೀಡಿಯಾಗಿದೆ. ಪಕ್ಷದ ಕಾರ್ಯಕರ್ತರ್ಯಾರು ಕೂಡ ಬ್ರಿಗೇಡ್ ಸಮಾವೇಶದಲ್ಲಿ ಭಾಗವಹಿಸಬಾರದೆಂದು ಸೂಚಿಸಿದ್ದೇವೆ. ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಲಿದ್ದಾರೆ. ಇದನ್ನೆಲ್ಲ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಗಮನಕ್ಕೆ ತಂದಿದ್ದೇನೆ ಎಂದು ಯಡ್ಡಿ ಹೇಳಿದ್ದಾರೆ.