ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಜಿಲ್ಲೆಯಲ್ಲಿ ಮಾತನಾಡಿದ ಅವರು, ನಾನು ಬದುಕಿರುವುದೇ ನಾಡಿನ ಕ್ಷೇಮಕ್ಕಾಗಿ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಖಚಿತ. ಸಮ್ಮಿಶ್ರ ಸರಕಾರ ರಚನೆಗೆ ಆಸ್ಪದ ನೀಡಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
ದೇಶದ ಇತರ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ರಾಜ್ಯಗಳ ಹಿತಕ್ಕಾಗಿ ಶ್ರಮಿಸುತ್ತಿವೆ. ಆದ್ದರಿಂದ, ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ರಾಜ್ಯದ ಹಿತಾಸಕ್ತಿ ರಕ್ಷಿಸುವುದು ಅಗತ್ಯವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.