ಪಕ್ಷದ ಹಿತದೃಷ್ಟಿಯಿಂದ ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಾರೆ: ಸತೀಶ್ ಜಾರಕಿಹೊಳಿ

ಭಾನುವಾರ, 19 ಜೂನ್ 2016 (11:49 IST)
ಪಕ್ಷದ ಹಿತದೃಷ್ಟಿಯಿಂದ ನನ್ನನ್ನು ಸಚಿವ ಸ್ಥಾನದಿಂದ ಕೈ ಬಿಟ್ಟಿದ್ದಾರೆ. ಅದ್ದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯರ ನಿರ್ಧಾರವನ್ನು ಸ್ವಾಗತಿಸುತ್ತೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ಮುಖ್ಯಮಂತ್ರಿಯವರ ಆದೇಶದಂತೆ ಸಚಿವ ಸ್ಥಾನಕ್ಕೆ ಈಗಾಗಲೇ ನಾನು ರಾಜೀನಾಮೆ ನೀಡಿದ್ದೇನೆ. ನಾನು ಪ್ರತಿಯೊಂದನ್ನು ಕ್ರೀಡಾಮನೋಭಾವದಿಂದ ತೆಗೆದುಕೊಳ್ಳುತ್ತೇನೆ. ಸಚಿವ ಸಂಪುಟದಿಂದ ತೆಗೆದುಹಾಕಿರುವ ಬಗ್ಗೆ ಯಾವುದೇ ರೀತಿಯ ಅಸಮಾಧಾನವಿಲ್ಲ ಎಂದು ತಿಳಿಸಿದ್ದಾರೆ.
 
ಮುಂಬರುವ ಎರಡು ವರ್ಷಗಳಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿರುವುದರಿಂದ ಪಕ್ಷದ ಸಂಘಟನೆಗಾಗಿ ಕೆಲವರನ್ನು ಸಚಿವ ಸಂಪುಟದಿಂದ ಕೈಬಿಡಲಾಗಿದೆ. ಮುಖ್ಯಮಂತ್ರಿಯವರ ನಿರ್ಧಾರದ ಹಿಂದೆ ಪಕ್ಷದ ಹಿತ ಅಡಗಿರುತ್ತದೆ ಎಂದು ಹೇಳಿದ್ದಾರೆ.
 
ಸಚಿವ ಸ್ಥಾನ ಕೈ ತಪ್ಪಿದ್ದರೂ ಕಾಂಗ್ರೆಸ್ ಪಕ್ಷವನ್ನು ಜಿಲ್ಲೆಯಲ್ಲಿ ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಶಾಸಕ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ