ರಾಜ್ಯ ರಾಜಕೀಯಕ್ಕೆ ಮರಳಲು ಯಡಿಯೂರಪ್ಪ ಇಂಗಿತ

ಸೋಮವಾರ, 31 ಆಗಸ್ಟ್ 2015 (18:20 IST)
ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ ರಾಜ್ಯ ರಾಜಕೀಯಕ್ಕೆ ಮರಳಲು ಬಯಸುತ್ತಿರುವುದಾಗಿ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
 
ಹಾವೇರಿಯಲ್ಲಿ ತಮ್ಮ ಇಂಗಿತವನ್ನು ವ್ಯಕ್ತಪಡಿಸಿದ ಯಡಿಯೂರಪ್ಪ, ರಾಷ್ಟ್ರ ರಾಜಕಾರಣದಲ್ಲಿರುವುದಕ್ಕಿಂತ ರಾಜ್ಯ ರಾಜಕಾರಣದಲ್ಲಿಯೇ ನನಗೆ ಹೆಚ್ಚಿನ ಆಸಕ್ತಿಯಿದೆ ಎಂದು ತಿಳಿಸಿದ್ದಾರೆ.
 
ರಾಜ್ಯದಲ್ಲಿಯೇ ಇದ್ದು ಕೊನೆಯುಸಿರಿರುವವರೆಗೆ ರೈತರಿಗಾಗಿ ಹೋರಾಟ ಮಾಡುತ್ತೇನೆ ಎಂದು ರೈತ ಚೈತನ್ಯ ಯಾತ್ರೆಯಲ್ಲಿ  ಪ್ರತಿಜ್ಞೆ ಮಾಡಿದರು.
 
ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರಾಜ್ಯ ಅಭಿವೃದ್ಧಿಯಲ್ಲಿ, ಆರ್ಥಿಕತೆಯಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಇದ್ದು ಜನತೆಯ ಪಾಲಿಗೆ ಸತ್ತಂತಾಗಿದೆ ಎಂದು ಬಿಜೆಪಿ ಸಂಸದ, ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ವೆಬ್ದುನಿಯಾವನ್ನು ಓದಿ