ಖಂಡಿತವಾಗಿಯೂ ಎಂಎಲ್‌ಸಿ ಚುನಾವಣೆಗೆ ನಿಲ್ಲುತ್ತಿಲ್ಲ: ರಮ್ಯಾ

ಶನಿವಾರ, 14 ನವೆಂಬರ್ 2015 (16:30 IST)
ಎಂಎಲ್‌ಸಿ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ಖಂಡಿತವಾಗಿಯೂ ಎಂಎಲ್‌ಸಿ ಚುನಾವಣೆಗೆ ನಿಲ್ಲುತ್ತಿಲ್ಲ ಎಂದು ಮಾಜಿ ಸಂಸದೆ ರಮ್ಯಾ ಸ್ಪಷ್ಟಪಡಿಸಿದ್ದಾರೆ.
 
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಆಯೋಜಿಸಲಾದ ಮಕ್ಳಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ರಮ್ಯಾ ಗಿರೀಶ್ ಕಾರ್ನಾಡ್ ಅವರ ಹೇಳಿಕೆಯ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
 
ಚುನಾವಣೆಯಲ್ಲಿ ಯಾರು ನಿಲ್ಲಬೇಕು ಎನ್ನುವ ಚಿಂತನೆ ನಡೆದಿದೆ. ಚುನಾವಣೆಗೆ ಸಿದ್ದತೆ ಕೂಡಾ ನಡೆಯುತ್ತಿದೆ. ಆದರೆ ನಾನಂತೂ ಚುನಾವಣೆಯಲ್ಲಿ ಖಂಡಿತವಾಗಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
 
ಕಲೆ, ಕ್ರೀಡೆ, ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಮಕ್ಕಳಿಗೆ ಮಾಜಿ ಸಂಸದೆ ರಮ್ಯಾ ಪ್ರಶಸ್ತಿಗಳನ್ನು ನೀಡಿ ಗೌರವಿಸಿದರು.  

ವೆಬ್ದುನಿಯಾವನ್ನು ಓದಿ