ಬಿಜೆಪಿ ನಾಯಕರು ಗಾರ್ಡನ್ ಸಿಟಿಯನ್ನು ಗಾರ್ಬೇಜ್ ಸಿಟಿಯನ್ನಾಗಿ ಪರಿವರ್ತಿಸಿದ್ದನ್ನು ಮತದಾರರು ನೋಡಿದ್ದಾರೆ. ಮೂಲಸೌಕರ್ಯ ಒದಗಿಸದ ಬಗ್ಗೆ ಹಲವಾರು ವೇದಿಕೆಗಳಲ್ಲಿ ಚರ್ಚಿಸಿದ್ದಾರೆ, ಆದರೆ, ಚುನಾವಣೆ ಬಂದಾಗ ಮತ್ತೆ ಬಿಜೆಪಿಯನ್ನು ಆಯ್ಕೆ ಮಾಡಿರುವುದು ದುರ್ದೈವವೇ ಸರಿ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಕಿಡಿಕಾರಿದರು.