ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಮೃತದೇಹ ಪತ್ತೆ

ಬುಧವಾರ, 17 ಮೇ 2017 (13:15 IST)
ಕರ್ನಾಟಕ ಕೇಡರ್‌ನ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಅವರ ಮೃತದೇಹ ರಸ್ತೆಯಲ್ಲಿ ಪತ್ತೆಯಾಗಿದೆ
 
ನಾಲ್ಕು ವಾರಗಳ ರಜೆಯ ಮೇಲೆ ಸ್ವಂತ ಊರಿಗೆ ತೆರಳಿದ್ದ ತಿವಾರಿ, ಲಕ್ನೋದ ಗೆಸ್ಟ್‌ಹೌಸ್‌ನಲ್ಲಿ ಉಳಿದುಕೊಂಡಿದ್ದರು. ರಸ್ತೆಯ ಮೇಲೆ ತೆರಳುವಾಗ ಕುಸಿದು ಬಿದ್ದಿರಬಹುದು ಅಥವಾ ಯಾವುದೋ ವಾಹನ ಡಿಕ್ಕಿಯಾಗಿರಬಹುದು ಎನ್ನುವ ಸಂಶಯ ವ್ಯಕ್ತವಾಗಿದೆ.
 
ಅನುರಾಗ್ ತಿವಾರಿಯವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನು ನಿಖರವಾದ ವರದಿ ಬಂದಿಲ್ಲ ಎಂದು ಮೂಲಗಳು ತಿಳಿಸಿವೆ.
 
ಅನುರಾಗ್ ತಿವಾರಿ ಅತ್ಯಂತ ದಕ್ಷ ಅಧಿಕಾರಿಯಾಗಿದ್ದು ಹಲವು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಜನ ಸೇವೆ ಮಾಡಿದ್ದಾರೆ. ಅವರ ಸಾವಿಗೆ ಶೃದ್ಧಾಂಜಲಿ ಅರ್ಪಿಸುತ್ತೇವೆ. ಇನ್ನು ಹೆಚ್ಚಿನ ಮಾಹಿತಿ ಲಭಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ