ಎಟಿಎಂಗೆ ಹಣ ತುಂಬಿಸುತ್ತಿದ್ದಾಗ ದರೋಡೆ: 18.5ಲಕ್ಷ ಹಣ ದೋಚಿದ ಕಳ್ಳರು

ಸೋಮವಾರ, 30 ಅಕ್ಟೋಬರ್ 2017 (15:46 IST)
ಬೆಂಗಳೂರು: ಇತ್ತೀಚೆಗೆ ರಾಜ್ಯದಲ್ಲಿ ಎಟಿಎಂ ಮಷೀನ್ ನಲ್ಲಿರುವ ಹಣ ದರೋಡೆ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚು ನಡೆಯುತ್ತಿವೆ. ಇಂದು ಸಹ ಎಟಿಎಂಗೆ ಹಣ ತುಂಬಿಸುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ದರೋಡೆ ಮಾಡಿರುವ ಘಟನೆ ಜಾಲಹಳ್ಳಿ ಕ್ರಾಸ್‌ ನಲ್ಲಿ ನಡೆದಿದೆ.

ಜಾಲಹಳ್ಳಿ ಕ್ರಾಸ್‌ ಬಳಿಯ ಐಸಿಐಸಿಐ ಶಾಖೆ ಎಟಿಎಂಗೆ ಬ್ಯಾಂಕ್ ಸಿಬ್ಬಂದಿ ಹಣ ತುಂಬಿಸುತ್ತಿದ್ದ ವೇಳೆ ಬೈಕ್‌ ನಲ್ಲಿ ಬಂದ ದರೋಡೆಕೋರರು ಹಣ ತುಂಬಿಸುತ್ತಿದ್ದ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದಾರೆ. ಪ್ರತಿ ದಾಳಿಗೆ ಮುಂದಾದ ಕಸ್ಟೋಡಿಯನ್‌ ಗೆ ಚಾಕುವಿನಿಂದ ಇರಿದು 18.5 ಲಕ್ಷ ರೂ. ಹಣ ದೋಚಿದ್ದಾರೆ ಎನ್ನಲಾಗಿದೆ.

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಾಗರ್‌ ಹಾಗೂ ಮೋಹನ್‌ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ