ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮೊನ್ನೆಯಷ್ಟೇ ಸುದ್ದಿಗೋಷ್ಠಿ ಕರೆದು ಮಾತನಾಡುತ್ತಿದ್ದು, ಲಾಟರಿ ಹಗರಣದಲ್ಲಿ ಕಾಂಗ್ರೆಸ್ ಪಕ್ಷದ ವಿಧಾನಸಭಾ ಸದಸ್ಯರೋರ್ವರೂ ಭಾಗಿಯಾಗಿದ್ದಾರೆ ಎಂದಿದ್ದಾರೆ. ಆದರೆ ಸಂಪೂರ್ಣ ವಿವರ ನೀಡಿಲ್ಲ. ಆದ್ದರಿಂದ ಇಂತಹ ಗುಪ್ತ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ತಪ್ಪಿತಸ್ಥರಿದ್ದಾರೆ ಎಂಬ ಮಾಹಿತಿ ಅವರಿಗೆ ತಿಳಿದಿದ್ದಲ್ಲಿ ಕೂಡಲೇ ಅದನ್ನು ಬಹಿರಂಗ ಪಡಿಸಲಿ ಎಂದು ಒತ್ತಾಯಿಸಿದರು.
ಈ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಕುಮಾರಸ್ವಾಮಿ ಅವರು, ಪ್ರಕರಣದಲ್ಲಿ ಕೇವಲ ಪೊಲೀಸರೇ ಅಲ್ಲ ರಾಜ್ಯ ಸರ್ಕಾರದ ಓರ್ವ ಸಚಿವರೂ ಕೂಡ ಪ್ರಕರಣದಲ್ಲಿ ಪಾಲುದಾರರಾಗಿದ್ದಾರೆ ಎಂದಿದ್ದರು. ಆದರೆ ಹೆಸರನ್ನು ಬಹಿರಂಗಪಡಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಪರಮೇಶ್ವರ್ ಇಂದು ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.