ಆರೋಪ ಬಂದಾಕ್ಷಣ ನಾವೆಲ್ಲಾ ಆರೋಪಿಗಳಾಗಲ್ಲ: ಜಾರ್ಜ್

ಗುರುವಾರ, 20 ನವೆಂಬರ್ 2014 (15:29 IST)
ಭ್ರಷ್ಟಾಚಾರದ ವಿರುದ್ಧ ಪ್ರತಿಭಟಿಸುವ ಹಕ್ಕು ಬಿಜೆಪಿಗಿದೆ. ಆದರೆ, ಆರೋಪ ಬಂದಾಕ್ಷಣ ನಾವೆಲ್ಲಾ ಆರೋಪಿಗಳಲ್ಲ, ಭ್ರಷ್ಟಾಚಾರವನ್ನು ಸಾಬೀತುಪಡಿಸಿ ಎಂದು ಗೃಹ ಸಚಿವ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
 
ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಜನ ಸಚಿವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿದ್ದವು? ಎಷ್ಟು ಜನ ಜೈಲಿಗೆ ಹೋಗಿ ಬಂದಿದ್ದಾರೆ? ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುವುದಕ್ಕಿಂತ ತಮ್ಮಲ್ಲಿರುವ ಭ್ರಷ್ಟಾಚಾರಿಗಳ  ವಿರುದ್ಧ ಕ್ರಮ ಕೈಗೊಳ್ಳಿ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ಪಕ್ಷದ ನಾಲ್ಕು ಮಂದಿ ಸಚಿವರು ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿದ್ದು ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಬಿಜೆಪಿ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿತ್ತು. ಆದರೆ, ಪೊಲೀಸರು ಪ್ರತಿಭಟನೆಗೆ ಅವಕಾಶ ನಿರಾಕರಿಸಿದ್ದರು.
 
ಪ್ರತಿಭಟನೆ ನೆಪದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಾರ್ಜ್ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
 
 

ವೆಬ್ದುನಿಯಾವನ್ನು ಓದಿ