ದೇವೇಗೌಡ ಬರದಿದ್ದರೆ ಮಹಾ ಮಸ್ತಕಾಭಿಷೇಕ ನಿಂತು ಹೋಗುತ್ತಾ– ಮಂಜು

ಶುಕ್ರವಾರ, 26 ಜನವರಿ 2018 (19:15 IST)
ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಬರದಿದ್ದರೆ ಮಹಾ ಮಸ್ತಕಾಭಿಷೇಕ ನಿಂತು ಹೋಗುತ್ತಾ ಎಂದು ಸಚಿವ ಎ.ಮಂಜು ಪ್ರಶ್ನೆ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್.ಡಿ.ದೇವೇಗೌಡ ಅವರು ಬಾಹುಬಲಿ ಮಸ್ತಕಾಭಿಷೇಕ ಕಾಮಗಾರಿಗಳಲ್ಲಿ ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿರುವುದು ನೋವುಂಟು ಮಾಡಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸೂಕ್ತ ಉತ್ತರ ನೀಡುವೆ ಎಂದಿದ್ದಾರೆ.

ಮಸ್ತಕಾಭಿಷೇಕ ಕಾಮಗಾರಿಯ ದಾಖಲೆಗಳನ್ನು ಬಿಡುಗಡೆ ಮಾಡಲಾಗುವುದು. 2006ರ ಮಸ್ತಕಾಭಿಷೇಕದ ದಾಖಲೆಗಳನ್ನು ಅವರು ಬಿಡುಗಡೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.
 
ಅವರಂತೆ ನನಗೆ ಮಾತನಾಡಲು ಬರುತ್ತದೆ. ಅನಾಗರಿಕನಾಗಿ ನಾನು ಮಾತನಾಡಿಲ್ಲ. ಕುಮಾರಸ್ವಾಮಿ ರಾಜಕೀಯಕ್ಕೆ ಬರುವ ಮುಂಚಿನಿಂದ ರಾಜಕೀಯದಲ್ಲಿದ್ದೇನೆ. ಚುನಾವಣೆ ಬಂದಾಗ ಈ ರೀತಿ ನಡೆದುಕೊಳ್ಳಬಾರದು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ