ದೇವೇಗೌಡರ ಕುಟುಂಬದವ್ರನ್ನ ಪ್ರಶ್ನೆ ಮಾಡಿದ್ರೆ ಯಾರೂ ಉಳಿಯಲ್ಲ : ಸಿದ್ದರಾಮಯ್ಯ

ಸೋಮವಾರ, 10 ಏಪ್ರಿಲ್ 2023 (08:42 IST)
ಹಾಸನ : ಜೆಡಿಎಸ್ನಲ್ಲಿ ದೇವೇಗೌಡರ ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು, ಪ್ರಶ್ನೆ ಮಾಡಿದ್ರೆ ಪಕ್ಷದಲ್ಲಿ ಯಾರೂ ಉಳಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಹಾಸನ ಜಿಲ್ಲೆಯ ಅರಸೀಕೆರೆ ಪಟ್ಟಣದಲ್ಲಿ ಮಾಜಿ ಶಾಸಕ ಕೆ.ಎಂ ಶಿವಲಿಂಗೇಗೌಡ ಅವರನ್ನ ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಲ್ಲಿ ಶಿವಲಿಂಗೇಗೌಡ ಅವರಿಗೆ ಉಸಿರುಗಟ್ಟಿಸುವ ವಾತಾವರಣ ಇತ್ತು.

ದೇವೇಗೌಡರ ಕುಟುಂಬದವರು ಹೇಳಿದ್ದನ್ನ ಕೇಳಿಕೊಂಡು ಬಿದ್ದಿರಬೇಕು, ಪ್ರಶ್ನೆ ಮಾಡಿದ್ರೆ ಯಾರೂ ಉಳಿಯಲ್ಲ. ಅದಕ್ಕಾಗಿ ಅವರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ ಎಂದು ತಿಳಿಸಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ