ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಮಾಡಿಕೊಂಡು 10 ದಿನಗಳು ಕಳೆದರು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ನಮ್ಮ ಕುಟುಂಬಸ್ಥರಾದ ಸಿಎಂ ಸಿದ್ದರಾಮಯ್ಯ ಕೌಟಂಬಿಕ ಸಮಸ್ಯೆಗಳನ್ನು ಅರಿತುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಿ. ಪ್ರಕರಣದ ನಂತರ ಆದ ಎಲ್ಲ ಬೆಳವಣಿಗೆಯಿಂದ ನಮ್ಮ ಮನಸ್ಸಿಗೆ ತುಂಬಾ ನೋವು ತಂದಿದೆ ಎಂದು ಮೃತ ಎಂ.ಕೆ.ಗಣಪತಿ ಪತ್ನಿ ಪಾವನಾ ಕಣ್ಣೀರು ಹಾಕಿದರು.