ಅಕ್ರಮ ಹಣ ಪತ್ತೆಯಾಗಿದ್ರೆ ಯಡ್ಡಿ ಮನೆಯಲ್ಲಿ ಜೀತ: ರಮೇಶ್ ಜಾರಕಿಹೊಳಿ ಸವಾಲ್

ಸೋಮವಾರ, 20 ಫೆಬ್ರವರಿ 2017 (18:34 IST)
ನಮ್ಮ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ 3.7 ಲಕ್ಷ ರೂಪಾಯಿಗಳು ಮಾತ್ರ ದೊರೆತಿದ್ದು, ಅದಕ್ಕಿಂತ ಹೆಚ್ಚಾಗಿದ್ದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮನೆಯಲ್ಲಿ ಜೀತ ಮಾಡ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಸವಾಲ್ ಹಾಕಿದ್ದಾರೆ.
 
ಜಾರಕಿಹೊಳಿ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದಾಗ 150 ಕೋಟಿಗೂ ಹೆಚ್ಚು ಅಕ್ರಮ ಹಣ ಆಸ್ತಿ ಪಾಸ್ತಿ ಪತ್ತೆಯಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದರು.
 
ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಿಎಂ ಸಿದ್ದರಾಮಯ್ಯ ರೈಡ್‌ಗೆ ಸಂಬಂಧಿಸಿದಂತೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒತ್ತಾಯಿಸಿದ್ದರು.
 
 ಮುಖ್ಯಮಂತ್ರಿ ಸಿದ್ದರಾಮಯ್ಯ ಐಟಿ ಅಧಿಕಾರಿಗಳಿಗೆ ಪತ್ರ ಬರೆದು ರೈಡ್ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದ್ದೀರಾ ಎಂದು ಪತ್ರ ಬರೆದಿದ್ದಾರೆ. ಅವರು ಪತ್ರ ಬರೆದಿರುವುದನ್ನು ನೋಡಿದರೆ ಭ್ರಷ್ಟಾಚಾರದಲ್ಲಿ ಪಾಲ್ಗೊಂಡಿರುವುದು ಸಾಬೀತಾಗುತ್ತದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ