ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ತಪ್ಪು ಮಾಡಿದ್ದರೆ, ಕಾನೂನು ಕ್ರಮ ಕ್ರಮ ಜರುಗಿಸಲಿ. ಪ್ರಕರಣದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಮಕ್ಕಳು ಎಲ್ಲಿ ಹೋಗುತ್ತಾರೆ, ಏನು ಮಾಡುತ್ತಾರೆ ಎಂದು ನೋಡಲು ಸಾಧ್ಯವಾಗುತ್ತಾ. ಬೇರೆಯವರ ಮಕ್ಕಳು ಏನು ಮಾಡುತ್ತಿದ್ದಾರೆ, ಏನು ಮಾಡಿದ್ದಾರೆ ಎಂದು ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು.
ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿ ಪುಂಡಾಟಿಕೆ ಮೇರೆದಿರುವುದನ್ನು ಪ್ರಶ್ನಿಸಿದ ಸ್ಥಳೀಯರಿಗೆ ನಾನು ಮಂತ್ರಿ ಮಗ ನಿಮ್ಮನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ಧಮ್ಕಿ ಹಾಕಿದ್ದಲ್ಲದೆ, ಸ್ನೇಹಿತರೊಂದಿಗೆ ಸ್ಥಳೀಯರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಆಕ್ರೋಶಗೊಂಡ ಸ್ಥಳಿಯರು ಮಂತ್ರಿ ಪುತ್ರನನ್ನು ಬಾರಕೋಲಿನಿಂದ ಬಾರಿಸಿ ಠಾಣೆಗೆ ಕರೆದುಕೊಂಡು ಹೋಗಿದ್ದರು.