ರಾಜ್ಯ ಸಾರಿಗೆ ನೌಕರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ಮುಷ್ಕರ ನಿರತ ಚಾಲಕರು ಹಾಗೂ ನಿರ್ವಾಹಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿರುವ ಸರಕಾರ, ತರಬೇತಿ ಪಡೆಯುತ್ತಿರುವರನ್ನೇ ಸಾರಿಗೆ ಇಲಾಖೆಗೆ ನೇಮಕ ಮಾಡಿಕೊಂಡು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳನ್ನು ಓಡಿಸಲು ಸರಕಾರ ಚಿಂತಿಸುತ್ತಿದೆ ಎಂದು ಹೇಳಲಾಗುತ್ತಿದೆ.
ಈಗಾಗಲೇ 15 ಸಾವಿರ ಟ್ರೈನಿಗಳಿದ್ದು, ಅವರನ್ನು ನೇಮಕ ಮಾಡಿಕೊಂಡು ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳನ್ನು ಓಡಿಸಲು ಸರಕಾರ ನಿರ್ಧರಿಸಿದ್ದು, ಈ ಕುರಿತು ಸಾರಿಗೆ ಇಲಾಖೆಯ 4 ಭಾಗಗಳ ಎಂಡಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.