ನಾ ತಪ್ಪಿತಸ್ಥ ಎಂದಾದ್ರೆ ನೇಣು ಹಾಕಿಕೊಳ್ತೇನೆ : ಕುಮಾರಸ್ವಾಮಿ ಘೋಷಣೆ

ಶುಕ್ರವಾರ, 23 ಜೂನ್ 2017 (14:11 IST)
ಜಂತಕಲ್ ಮೈನಿಂಗ್ ಪ್ರಕರಣ ವಿಚಾರದಲ್ಲಿ ನಾನು ತಪ್ಪಿತಸ್ಥ ಎಂದು ಪ್ರೂವ್ ಆದ್ರೆ ಸಾರ್ವಜನಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
 
ಪ್ರಕರಣದಲ್ಲಿ ನಾನು ಕಿಕ್ ಬ್ಯಾಕ್ ಪಡೆದಿದ್ದೇನೆ ಎಂದು ಆರೋಪಿಸಲಾಗುತ್ತಿದೆ. ಇದು ನಿಜ ಎಂದು ಸಾಬೀತಾದಲ್ಲಿ ಸಾರ್ವಜನಿಕವಾಗಿ ನೇಣು ಹಾಕಿಕೊಳ್ಳುತ್ತೇನೆ ಎಂದು ಸವಾಲ್ ಹಾಕಿದ್ದಾರೆ.
 
ಜಂತಕಲ್ ಮೈನಿಂಗ್ ಪ್ರಕರಣ ನಡೆದೇ ಇಲ್ಲ ಎಂದು ಹಲವಾರು ಬಾರಿ ಹೇಳಿದ್ದೇನೆ. ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಮೊದಲು ನನ್ನನ್ನು ಸಾಕ್ಷಿಯಾಗಿ ಪರಿಗಣಿಸಲಾಗಿತ್ತು. ಇದೀಗ ಆರೋಪಿಯನ್ನಾಗಿಸುತ್ತಿರುವ ಹಿಂದೆ ಷಡ್ಯಂತ್ರ ನಡೆದಿದೆ ಎಂದು ಕಿಡಿಕಾರಿದ್ದಾರೆ.
 
ನನ್ನ ಜತೆ  ಹುಡುಗಾಟ ಆಡ್ತಾ ಇದ್ದಾರಾ? ನನ್ನ ಜತೆ ಚೆಲ್ಲಾಟವಾಡುತ್ತಿದ್ದಾರಾ? ನನ್ನ ಹೆಸರು ಹಾಳು ಮಾಡಲು ಸಿಡಿ, ಪೆನ್‌ಡ್ರೈವ್ ತೋರಿಸಿ ಹೆದರಿಸ್ತೀರಾ? ಎಸ್‌‌ಐಟಿ ಅಧಿಕಾರಿಗಳು ಆರೋಪ ಸಾಬೀತುಪಡಿಸಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸವಾಲ್ ಹಾಕಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ