ಡಿ.ಕೆ.ಶಿವಕುಮಾರ್ ದೆಹಲಿಗೆ ಹೋದರೆ ಪ್ರಧಾನಿ ಆಗ್ತಾರಾ?

ಬುಧವಾರ, 19 ಆಗಸ್ಟ್ 2020 (18:12 IST)
ರಾಜ್ಯ ಸಚಿವ ಸಂಪುಟ ಬಗೆಗಿನ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಈ ನಡುವೆ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ಸಚಿವ ಬಿ.ಸಿ.ಪಾಟೀಲ್ ಆಗ್ರಹ ಮಾಡಿದ್ದಾರೆ.

ಡಿಸಿಎಂ ಹುದ್ದೆ ಕೇಳಲು ಸಚಿವ ರಮೇಶ್ ಜಾರಕಿಹೊಳಿ ದೆಹಲಿಗೆ ಹೋಗಿದ್ಯಾಕೆ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಚಿವ ಬಿ.ಸಿ.ಪಾಟೀಲ್, ಬೇರೆ ಬೇರೆ ಕೆಲಸಗಳಿಗಾಗಿ ದೆಹಲಿಗೆ ಹೋಗಿರಬಹುದು ಎಂದಿದ್ದಾರೆ.

ಇದೇ ವೇಳೆ, ನಾನು ದೆಹಲಿಗೆ ಹೋಗಿ ಬರಬೇಕೆಂದುಕೊಂಡಿದ್ದೇನೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗುತ್ತಾರೆ ಎಂದಾಕ್ಷಣ ಅವರು ಪ್ರಧಾನಿ ಆಗಲಿಕ್ಕೆ ಹೋಗಿದ್ದಾರೆ ಎಂದು ಹೇಳೋಕೆ ಬರುತ್ತಾ? ಅಂತ ಪತ್ರಕರ್ತರನ್ನೇ ಮರು ಪ್ರಶ್ನಿಸಿದ್ದಾರೆ ಸಚಿವ ಬಿ.ಸಿ.ಪಾಟೀಲ್.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ