ಸಿದ್ದರಾಮಯ್ಯ, ರಾಮಲಿಂಗಾರೆಡ್ಡಿ ಹಿಂದೂಗಳಾಗಿದ್ದರೆ ಪಿಎಫ್‌ಐ ನಿಷೇಧಿಸಲಿ– ಆರ್.ಅಶೋಕ್ ಸವಾಲು

ಗುರುವಾರ, 4 ಜನವರಿ 2018 (19:01 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಹಿಂದೂಗಳಾಗಿದ್ದರೆ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ನಿಷೇಧ ಮಾಡಲಿ ಎಂದು ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್ ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ದೀಪಕ್ ರಾವ್ ಕೊಲೆ ಹಿಂದೆ ಪಿಎಫ್‌ಐ ಕೈವಾಡ ಇದೆ. ಇದಕ್ಕೆ ರಾಜ್ಯ ಸರಕಾರದ ಕುಮ್ಮಕ್ಕಿದೆ. ಗೃಹ ಸಚಿವರು ಕೊಲೆ ಪ್ರಕರಣದ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
 
ಪಿಎಫ್‍ಐ ಮೇಲಿನ 1200 ಕೇಸ್‌ಗಳನ್ನು ರಾಜ್ಯ ಸರಕಾರ ವಾಪಸ್ ಪಡೆದಿದೆ. ಕುಟುಂಬಿಕ ಕಲಹದಿಂದ ನಡೆದ ಹತ್ಯೆಗಳು ಎಂದು ಗೃಹ ಸಚಿವರು ಬೇಜವಾಬ್ದಾರಿಯಿಂದ ಹೇಳಿಕೆ ನೀಡಿದ್ದಾರೆ. ರಾಜ್ಯ ಸರಕಾರದ ಕುಮ್ಮಕ್ಕಿಲ್ಲದೆ ಇಂತಹ ಕೊಲೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ