ಗ್ಯಾರಂಟಿ ಈಡೇರಿಸದಿದ್ರೆ ಮುಂದೆ ಮತ ಕೇಳಲ್ಲ

ಬುಧವಾರ, 5 ಜುಲೈ 2023 (19:48 IST)
ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ.. ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತ ಕೇಳಲು ಬರಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್​​ ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ನಾವು ಕೊಟ್ಟಿರುವ ಎಲ್ಲಾ ಭರವಸೆ ಈಡೇರಿಸುತ್ತೇವೆ.. ಸರ್ಕಾರದ ಯೋಜನೆ ಪಡೆಯಲು ಯಾರೂ ಲಂಚ ಕೊಡಬೇಡಿ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರೇ ಬಂದು ನಿಮಗೆ ಯೋಜನೆ ತಲುಪಿಸಲಿದ್ದಾರೆ ಎಂದರು. ಇನ್ನು ಗೃಹಜ್ಯೋತಿ ಯೋಜನೆ ಜಾರಿಗೆ ಬಂದಿದ್ದು, ಮುಂದಿನ ತಿಂಗಳು ನೀವ್ಯಾರೂ ಕರೆಂಟ್​ ಬಿಲ್​ ಕಟ್ಟಬೇಡಿ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ