ಪಕ್ಷ ಬಯಸಿದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ- ಬಿ.ವೈ.ರಾಘವೇಂದ್ರ

ಶುಕ್ರವಾರ, 19 ಜನವರಿ 2018 (12:02 IST)

ಮುಂಬರುವ ವಿಧಾನಸಭೆ ಚುನಾವಣೆಗೆ ಪಕ್ಷ ಬಯಸಿದರೆ ಸ್ಪರ್ಧೆ ಮಾಡಲಾಗುವುದು ಎಂದು ಬಿ.ಎಸ್.ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಬಿಜೆಪಿ ಶಾಸಕ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಬಿ.ಎಸ್.ಯಡಿಯೂರಪ್ಪ ಅವರು ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕೆ.ಎಸ್.ಈಶ್ವರಪ್ಪ ಹಾಗೂ ರುದ್ರೇಗೌಡ ಅವರು ರೇಸಿನಲ್ಲಿದ್ದಾರೆ. ಬೈಂದೂರು ಹಾಗೂ ರಾಣೆ ಬೆನ್ನೂರು ಕ್ಷೇತ್ರಗಳಲ್ಲಿ ಕೂಡ ಆಕಾಂಕ್ಷಿಗಳು ರೇಸಿನಲ್ಲಿದ್ದಾರೆ. ಆದ್ದರಿಂದ ಅಲ್ಲಿಯೂ ಸ್ಪರ್ಧೆ ಮಾಡಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ