ಫೋನ್ ಕದ್ದಾಲಿಕೆಯಾಗಿದ್ದರೆ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ - ಸಂಸದ ಶ್ರೀನಿವಾಸ್ ಪ್ರಸಾದ್

ಶನಿವಾರ, 17 ಆಗಸ್ಟ್ 2019 (10:46 IST)
ಚಾಮರಾಜ ನಗರ : ಫೋನ್ ಕದ್ದಾಲಿಕೆಯಾಗಿದ್ದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ತನಿಖೆ ನಡೆಯಲಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಆಗ್ರಹಿಸಿದ್ದಾರೆ.



ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಫೋನ್ ಕದ್ದಾಲಿಕೆಗೆ ಕುಮಾರಸ್ವಾಮಿ ಅವರು ಹೊಣೆಗಾರರು ಅನ್ನೋದನ್ನು ನಾನು ಕೇಳಿದ್ದೇನೆ. ಫೋನ್ ಕದ್ದಾಲಿಕೆ ಬಹುದೊಡ್ಡ ಅಪರಾಧವಾಗಿದೆ. ಆದ್ದರಿಂದ ಅವರ ವಿರುದ್ಧ ತನಿಖೆಯಾಗಲಿ ಎಂದು ಹೇಳಿದ್ದಾರೆ.

 

ಹಿಂದೆ ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದ ವೇಳೆ ಈ ವಿಚಾರ ಪಾರ್ಲಿಮೆಂಟಿನಲ್ಲಿ ಚರ್ಚೆ ನಡೆದಿತ್ತು. ಈಗ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಅವರ ವಿರುದ್ಧ ಆರೋಪ ಮಾಡುವ ಬದಲು ಚರ್ಚೆ ನಡೆದು ಪ್ರಕರಣದ ತನಿಖೆಯಾಗಲಿ. ಈ ವಿಚಾರವಾಗಿ ಇದೀಗ ರಾಜ್ಯ ಸರ್ಕಾರ ಯಾವ ರೀತಿ ತನಿಖೆ ಕೈಗೊಳ್ಳುತ್ತದೆ ಎಂಬುದನ್ನು ನೋಡೋಣ ಎಂದು ಅವರು ತಿಳಿಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ