ಉತ್ತರ ಪ್ರದೇಶದ ಸಿಎಂ ಮದುವೆಯಾಗಿದ್ರೆ ಬೆಲೆ ಏರಿಕೆ ಆಗುತ್ತಿರಲಿಲ್ಲ : ಇಬ್ರಾಹಿಂ ವ್ಯಂಗ್ಯ

ಸೋಮವಾರ, 27 ಫೆಬ್ರವರಿ 2023 (08:14 IST)
ಮಂಡ್ಯ : ಉತ್ತರ ಪ್ರದೇಶದ ಮುಖ್ಯಮಂತ್ರಿ ಮದುವೆಯಾಗಿದ್ದರೆ ಬೆಲೆ ಏರಿಕೆ ಆಗುತ್ತಿರಲಿಲ್ಲ ಎಂದು ಯೋಗಿ ಆದಿತ್ಯನಾಥ್ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಪಿ ಸಿಎಂಗೆ ಮದುವೆ ಆಗಿದ್ದರೆ ಬೆಲೆ ಏರಿಕೆ ಆಗ್ತಿರಲಿಲ್ಲ. ಹೆಂಡತಿ, ಮಕ್ಕಳಿಲ್ಲದವರ ಕೈಗೆ ದೇಶ ಕೊಟ್ರೆ ಬೆಲೆ ಏರಿಕೆ ಆಗದೆ ಇನ್ನೇನು? ಲವ್ ಲವ್ ಅಂತಾವೆ,

ಲವ್ ಅಂದರೆ ಏನ್ ಗೊತ್ತು ಯೋಗಿಗೆ? ಲವ್ ಮಾಡಿ ಎಲ್ರೂ ಮದುವೆ ಆಗ್ತಾರೆ, ಲವ್ ಅನುಭವ ಅವನಿಗೆ ಇಲ್ಲ. ಸಂಸಾರ ನಡೆಸುವ ಅನುಭವ ಇಲ್ಲ. ಹಾಗಾಗಿ ಇಂತಹವರ ಕೈಗೆ ದೇಶ ಕೊಟ್ರೆ ಆಡಳಿತ ನಡೆಸಲು ಆಗಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ