ವಿಜಯೇಂದ್ರಗೆ ಟಿಕೆಟ್ ಕೊಡದಿದ್ದರೆ ಆತ್ಮಹತ್ಯೆ ಬೆದರಿಕೆ

ಸೋಮವಾರ, 23 ಏಪ್ರಿಲ್ 2018 (19:06 IST)
ವರುಣಾ ಕ್ಷೇತ್ರದಿಂದ ವಿಜಯೇಂದ್ರಗೆ ಟಿಕೆಟ್ ಕೊಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯನ್ನು ವ್ಯಕ್ತಿಯೊಬ್ಬ ಹಾಕಿದ್ದಾನೆ. 
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರನಾಗಿರುವ ವಿಜಯೇಂದ್ರಗೆ ಟಿಕೆಟ್ ನೀಡಲೇಬೇಕು ಎಂದು ಬೂಕನಕೆರೆ ಮಧು ಆಗ್ರಹ ಮಾಡಿದ್ದಾರೆ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಿದ್ದಾನೆ. 
 
ಬಿಜೆಪಿ ಕಾರ್ಯಕರ್ತನಾಗಿರುವ ಮಧು ಕೆ.ಆರ್.ಪೇಟೆ ತಾಲ್ಲೂಕು ಯಡಿಯೂರಪ್ಪ ಅಭಿಮಾನಿಗಳ ಸಂಘದ ಅಧ್ಯಕ್ಷರೂ ಆಗಿದ್ದಾರೆ. 
 
ಮಂಡ್ಯ ಜಿಲ್ಲೆಯ ಬೂಕನಕೆರೆ ಯಡಿಯೂರಪ್ಪ ಹುಟ್ಟೂರು.ನಮ್ಮೂರ ಮೊಮ್ಮಗನಿಗೆ ಟಿಕೆಟ್ ಕೊಡಬೇಕು.ನಾಳೆ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಬೇಕು‌.ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವೆ ಎಂದು ಬಿಎಸ್ ವೈಗೆ ಎಚ್ಚರಿಕೆ ರವಾನೆ ಮಾಡಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ