ಉಗ್ರಗಾಮಿಗಳಾದರೆ ನಮ್ಮನ್ನೇಕೆ ಬಂಧಿಸಿಲ್ಲ– ಶೋಭಾ ಪ್ರಶ್ನೆ

ಶುಕ್ರವಾರ, 12 ಜನವರಿ 2018 (14:30 IST)
ಬಿಜೆಪಿಯವರು ಉಗ್ರಗಾಮಿಗಳು ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಮ್ಮನ್ನೇಕೆ ಬಂಧಿಸಿಲ್ಲ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ತುಮಕೂರಿನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸುವ ಮುನ್ನ ಮಾತನಾಡಿದ ಅವರು, ಭಯೋತ್ಪಾದಕರು, ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಎನ್ನುವುದಾದರೆ ನಮ್ಮನ್ನು ಬಂಧಿಸಿ ಎಂದು ಸವಾಲು ಹಾಕಿದ್ದಾರೆ.
 
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಎಂಬುದನ್ನು ಮರೆತು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಜನರು ಗಮನಿಸುತ್ತಿದ್ದು, ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ