ನೀವು ಚುನಾವಣೆಯಲ್ಲಿ ಗೆಲ್ಲಿಸದಿದ್ರೆ ನಾನು ಸಾಯ್ತಿನಿ ಅಂದ ಮಾಜಿ ಸಚಿವ

ಬುಧವಾರ, 15 ನವೆಂಬರ್ 2017 (20:11 IST)
ನಾನು ಯಾವ ತಪ್ಪು ಮಾಡಿದ್ದೇನೆ ಅಂತ ನನ್ನನ್ನು ಸೋಲಿಸ್ತಿದ್ದೀರಾ? ಎಂದು ಮಾಜಿ ಸಚಿವ ಸೋಮಶೇಖರ್ ಕ್ಷೇತ್ರದ ಮತದಾರರ ಮುಂದೆ ಅಳಲು ತೋಡಿಕೊಂಡ ಘಟನೆ ನಡೆಯಿತು.
 
ಮುಂಬರುವ ಚುನಾವಣೆಯಲ್ಲಿ ನನಗೆ ಕೊನೆಯದೊಂದು ಅವಕಾಶ ಕೊಡಿ. ನೀವು ಗೆಲ್ಲಿಸದಿದ್ರೆ ನಾನು ಸಾಯ್ತೇನೆ ಎಂದು ಸಾರ್ವಜನಿಕ ಸಭೆಯಲ್ಲಿ ಗದ್ಗದಿತರಾಗಿ ಹೇಳಿದ್ದಾರೆ.
 
ಜೆಡಿಯು ಪಕ್ಷದ ರಾಜ್ಯಾಧ್ಯಕ್ಷರಾದ ಮಾಜಿ ಸಚಿವ ಸೋಮಶೇಖರ್ ನಿರಂತರವಾಗಿ ಸೋಲನುಭವಿಸುತ್ತಿರುವ ಹಿನ್ನೆಲೆಯಲ್ಲಿ ಬೇಸರಗೊಂಡು ತಾವು ಯಾವುದೇ ತಪ್ಪು ಮಾಡದಿದ್ದರೂ ಮತದಾರರು ಯಾಕೆ ಸೋಲಿಸುತ್ತಿದ್ದಾರೆ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ ಎಂದಿದ್ದಾರೆ.
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿ ನಿಮ್ಮ ಸೇವೆ ಮಾಡಲು ಅವಕಾಶ ಕಲ್ಪಿಸಿ ಎಂದು ಮಾಜಿ ಸಚಿವ ಸೋಮಶೇಖರ್ ಮತದಾರರಲ್ಲಿ ಕೋರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ