ಉಡುಪಿ: ಬಾಯಿ ತೆರೆದರೆ ರಾಮಾಯಣ, ಭಗವದ್ಗೀತೆ, ಮಹಾಭಾರತ ಎಂದು ಹೇಳುವ ಚಕ್ರವರ್ತಿ ಸೂಲಿಬೆಲೆ, ಸುಳ್ಳಿನ ಚಕ್ರವರ್ತಿ. ಅವರು ಯಾವ ಪ್ರಮಾಣದಲ್ಲಿ ಸುಳ್ಳು ಹೇಳುತ್ತಾರೆ ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತು ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಅವರು ಕುಂದಾಪುರದಲ್ಲಿ ಹಮ್ಮಿಕೊಂಡಿರುವ ಚಕ್ರವರ್ತಿ ಸೂಲಿಬೆಲೆ ಉಪನ್ಯಾಸ ಕಾರ್ಯಕ್ರಮದ ಆಯೋಜಕರಿಗೆ ಪೊಲೀಸರು ನೋಟಿಸ್ ಸಂಬಂಧ ಪ್ರತಿಕ್ರಿಯಿಸಿದ ಅವರು ಅವರು ಕಪ್ಪಗಿರುವುದನ್ನು ಬೆಳ್ಳಗೆ ಮಾಡುವುದರಲ್ಲಿ, ಬೆಳ್ಳಗೆ ಇರುವುದನ್ನು ಕಪ್ಪು ಮಾಡುವುದರಲ್ಲಿ ಸೂಲಿಬೆಲೆ ನಿಸ್ಸೀಮರು ಎಂದರು.
ನಾವು ಸೂಲಿಬೆಲೆಯಿಂದ ಪಾಠ ಕೇಳಬೇಕಾಗಿಲ್ಲ. ಅವರು ಮೂರು ದಿನ ಉಡುಪಿ ಜಿಲ್ಲೆಯಲ್ಲಿ ಇರುವ ವಿಚಾರ ಪೊಲೀಸ್ ವರಿಷ್ಠಾಧಿಕಾರಿಗಳಿಂದ ತಿಳಿಯಿತು. ಖಂಡಿತವಾಗಿ ಅವರು ತಮ್ಮ ಪ್ರವಾಸ ಮಾಡಬಹುದು. ಆದರೆ ದ್ವೇಷ ಭಾಷಣ, ಸುಳ್ಳು ಬಿತ್ತುವ ಕೆಲಸ, ವಿಷ ಬೀಜ ಬಿತ್ತುವ ಕೆಲಸ ಮಾಡದಿರಲಿ ಎಂದು ಹೇಳಿದರು.