ಸಾಬೀತುಪಡಿಸಿದ್ರೆ ರಾಮಸ್ವಾಮಿ ಹೇಳುವ ಶಿಕ್ಷೆಗೆ ಗುರಿಯಾಗ್ತೀನಿ : ರೇವಣ್ಣ

ಗುರುವಾರ, 2 ಮಾರ್ಚ್ 2023 (14:05 IST)
ಹಾಸನ : ಮಾಜಿ ಶಾಸಕ ಎ.ಮಂಜು ಜೊತೆ ಅಡ್ಜಸ್ಟ್ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡಿದ್ದೇನೆ ಎಂದು ಶಾಸಕ ಎ.ಟಿ ರಾಮಸ್ವಾಮಿ ಸಾಬೀತು ಪಡೆಸಿದರೆ ನಾನು ಅವರು ಹೇಳುವ ಶಿಕ್ಷೆಗೆ ಗುರಿಯಾಗುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
 
ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ.ಟಿ ರಾಮಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಮಗನ ಮೇಲೆ ಕೇಸ್ ದಾಖಲಿಸಿದವನ ಜೊತೆ ರಾಜಿ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ರಾಮಸ್ವಾಮಿ ಹೇಳಿದ್ದಾರೆ.

ಅವರು ಸೀನಿಯರ್ ಅಡ್ವಕೇಟ್ ಇಟ್ಟುಕೊಂಡರು ಸಹ ಹೈಕೋರ್ಟ್ನಲ್ಲಿ ನಮ್ಮ ಪರವೇ ಆಗಿದೆ. ಸುಪ್ರೀಂ ಕೋರ್ಟ್ನಲ್ಲಿ ನಮ್ಮ ಅಡ್ವಕೇಟ್ ಬಾರದ ಕಾರಣ ರಿಮೆಂಟ್ ಆಯ್ತು. ಅದರ ಪ್ರತಿಯನ್ನು ರಾಮಸ್ವಾಮಿ ಓದಿಕೊಳ್ಳಲಿ. ನಮ್ಮ ಸಂಪೂರ್ಣ ಆಸ್ತಿಯನ್ನು ಐಟಿಗೆ ನೀಡಿದ್ದೇನೆ ಇಡಿ ಮೂಲಕ ತನಿಖೆ ನಡೆಸಿಕೊಳ್ಳಲಿ ಎಂದು ಗುಡುಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ