ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

Sampriya

ಗುರುವಾರ, 26 ಜೂನ್ 2025 (20:08 IST)
Photo Credit X
ಬೆಂಗಳೂರು: ವನ್ಯಜೀವಿ ಹಾಗೂ ಮಾನವ ಸಂಘರ್ಷವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದೇ ಮಲೆ ಮಹದೇಶ್ವರ ಅರಣ್ಯ ಪ್ರದೇಶದಲ್ಲಿ ವ್ಯಾಪ್ತಿಯಲ್ಲಿ ನಿಗೂಢವಾಗಿ ಹುಲಿಗಳು ಸಾವನ್ನಪ್ಪಿರುವುದಕ್ಕೆ ಕಾರಣ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ. 

ಹುಲಿಗಳ ಸಾವನ್ನಪ್ಪಿದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಸುನೀಲ್ ಕುಮಾರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 

ವನ್ಯಜೀವಿ ಹಾಗೂ ಮಾನವ ಸಂಘರ್ಷವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ಇರುವುದೇ ಈ ಸಮಸ್ಯೆಯ ಮೂಲಕ. ಹುಲಿಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ

ಅರಣ್ಯ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ಮಾಡುವುದರ ಜತೆಗೆ ವನ್ಯಜೀವಿ- ಮಾನವ ಸಂಘರ್ಷಕ್ಕೆ ಶಾಶ್ವತ ಪರಿಣಾಮ ಕಂಡುಕೊಳ್ಳುವುದಕ್ಕೆ ಪ್ರಯತ್ನಿಸಬೇಕು. ಪಶ್ಚಿಮ ಘಟ್ಟ ಸೇರಿದಂತೆ ರಾಜ್ಯಾದ್ಯಂತ ಈಗ ಈ ಸಮಸ್ಯೆ ಉಲ್ಬಣವಾಗಿದ್ದು, ಇದೊಂದು ಆದ್ಯತಾ ವಿಚಾರ ಎನ್ನುವುದನ್ನು ಸರ್ಕಾರ ಮರೆಯಬಾರದು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ