ಪಡಿತರ ಅಕ್ಕಿಯಲ್ಲಿ ಅಕ್ರಮ !

ಮಂಗಳವಾರ, 25 ಜನವರಿ 2022 (07:32 IST)
ರಾಯಚೂರು : ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗುರಗುಂಟಾದಲ್ಲಿ ಗೋದಾಮೊಂದರ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ರೂ ಮೌಲ್ಯದ ಪಡಿತರ ಅಕ್ಕಿಯನ್ನ ಜಪ್ತಿ ಮಾಡಿದ್ದಾರೆ.
 
ಗುರಗುಂಟಾದ ತಿಮ್ಮಾರೆಡ್ಡಿಗೆ ಸೇರಿದ ಗೋದಾಮಿನಲ್ಲಿ ಪಡಿತರ ಅಕ್ಕಿ ಪತ್ತೆಯಾಗಿದೆ. ಪೊಲೀಸರ ರಕ್ಷಣೆಯೊಂದಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ 4,92,600 ರೂ ಮೌಲ್ಯದ 821 ಚೀಲ ಪಡಿತರ ಅಕ್ಕಿ ಜಪ್ತಿ ಮಾಡಲಾಗಿದೆ.

ಆರೋಪಿ ತಿಮ್ಮಾರೆಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ದಾಳಿ ಹಿನ್ನೆಲೆ ಆಹಾರ ನಿರೀಕ್ಷಕ ಅಬ್ದುಲ್ ರೌಫ್ ದೂರು ದಾಖಲಿಸಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ