ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ; ಇಂದು ವಿಚಾರಣೆಗೆ ಹಾಜರಾಗಲಿರುವ ಸಚಿವ ಜಮೀರ್ ಅಹ್ಮದ್

ಶುಕ್ರವಾರ, 5 ಜುಲೈ 2019 (10:37 IST)
ಬೆಂಗಳೂರು : ಬಹುಕೋಟಿ ಐಎಂಎ ಜ್ಯುವೆಲ್ಸ್ ವಂಚನೆ ಪ್ರಕರಣ ಸಂಬಂದಿಸಿದಂತೆ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ನೋಟಿಸ್ ನೀಡಿದೆ.



ಐಎಂಎ ಪ್ರಕರಣದ ಆರೋಪಿ ಮನ್ಸೂರ್ ಖಾನ್‍ಗೆ ಸಚಿವ ಜಮೀರ್ ರಿಚ್ಮಂಡ್ ಟೌನ್‍ನ ಸರ್ಫೆಂಟೈನ್ ರಸ್ತೆಯಲ್ಲಿರುವ ನಿವೇಶನವನ್ನ ಮಾರಾಟ ಮಾಡಿದ್ದರು. ಈ ಹಿನ್ನಲೆಯಲ್ಲಿ  ಜೂನ್ 5ರಂದು ಇಡಿ ಕಚೇರಿಗೆ ಸಚಿವರು ಹಾಜರಾಗಿ ನಿವೇಶನ ಮಾರಾಟದ ಬಗ್ಗೆ ಮಾಹಿತಿ ನೀಡುವಂತೆ ಇಡಿ ನೋಟಿಸ್ ಜಾರಿಮಾಡಿತ್ತು.


ನೋಟೀಸ್ ನೀಡಿರುವ ಹಿನ್ನೆಲೆಯಲ್ಲಿ  ಕಾನೂನು ಪ್ರಕಾರವಾಗಿ ನಿವೇಶನ ಮಾರಾಟ ಮಾಡಿದ್ದೇನೆ. ಇಡಿ ವಿಚಾರಣೆಗೆ ಹಾಜರಾಗಿ ಎಲ್ಲಾ ದಾಖಲಾತಿಗಳನ್ನ ನೀಡಿ ವಿವರಣೆ ನೀಡುತ್ತೇನೆ ಎಂದಿದ್ದ ಸಚಿವ ಜಮೀರ್ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ


ಶಾಂತಿನಗರದ ಇಡಿ ಕಚೇರಿಗೆ ಸಚಿವರು ಹಾಜರಾಗಲಿದ್ದು, ಅಧಿಕಾರಿಗಳು ನಡೆಸುವ ವಿಚಾರಣೆ ಎದುರಿಸಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ