ಸೋಲಿನ ಹತಾಶೆಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್ಸಿಗರಿಗೆ ನಾಲಿಗೆ ಹರಿ ಬಿಡುವುದು ಚಾಳಿ: ಆರ್.ಅಶೋಕ್ ಆಕ್ರೋಶ

Sampriya

ಮಂಗಳವಾರ, 26 ಮಾರ್ಚ್ 2024 (14:15 IST)
ಬೆಂಗಳೂರು: : ಮೋದಿ ಮೋದಿ ಎಂದು ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡಿಯಬೇಕು ಎಂಬ ಸಚಿವ ಶಿವರಾಜ್ ತಂಗಡಗಿ ಹೇಳಿಕೆಗೆ  ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ್ ವ್ಯಕ್ತಪಡಿಸಿದ್ದಾರೆ.  

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದ ಆರ.ಅಶೋಕ್ ಅವರು, ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಸಂಸ್ಕೃತಿ ನೋಡಿ. 'ಮೋದಿ ಮೋದಿ' ಅನ್ನುವ ಯುವಕರ ಕಪಾಳಕ್ಕೆ ಹೊಡಿಬೇಕಂತೆ.

ಚುನಾವಣೆ ಬಂದಾಗಲೆಲ್ಲಾ ಸೋಲಿನ ಹತಾಶೆಯಿಂದ ಪ್ರಧಾನಿ ಮೋದಿ ಅವರ ವಿರುದ್ಧ ನಾಲಿಗೆ ಹರಿ ಬಿಡುವುದು ಕಾಂಗ್ರೆಸ್ ನಾಯಕರಿಗೆ ಚಾಳಿ ಆಗಿಬಿಟ್ಟಿದೆ.

2014 ಮತ್ತು 2019 ರಲ್ಲಿ ಈ ದೇಶದ ಜನ ಕಾಂಗ್ರೆಸ್ ಪಕ್ಷಕ್ಕೆ ಕಪಾಳ ಮೋಕ್ಷ ಮಾಡಿದ್ದಾರೆ. ಆದರೂ ಪಾಠ ಕಲಿಯದ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಶಾಶ್ವತವಾದ ಮೋಕ್ಷ ಕಾಣಿಸುವುದು ಕಟ್ಟಿಟ್ಟ ಬುತ್ತಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ