ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ- ಡಿ.ಕೆ ಶಿವಕುಮಾರ್ ಭರವಸೆ

ಬುಧವಾರ, 26 ಸೆಪ್ಟಂಬರ್ 2018 (14:38 IST)
ಹುಬ್ಬಳ್ಳಿ : ಮಹದಾಯಿ ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.


ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ‘ಕಣಕುಂಬಿಗೆ ಇಂದು ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡುತ್ತೇನೆ. ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ. ಈ ವಿಚಾರವಾಗಿ ಕೋರ್ಟ್ ಮುಂದೆ ಹೋಗುತ್ತೇವೆ’ ಎಂದು ಹೇಳಿದ್ದಾರೆ.


‘ನಾವು ನೀರು ತರಲು ಲೀಗಲ್ ಓಪಿನಿಯನ್ ಕೇಳಿದ್ದೇವೆ. ನ್ಯಾಯಾಧೀಕರಣ ತೀರ್ಪು ಬಮದ ತಿಂಗಳವರೆಗೂ ನಾವು ಸುಮ್ಮನೆ ಕುಳಿತಿಲ್ಲ. ಕಾನೂನು ತಂಡ ಮತ್ತು ತಾಂತ್ರಿಕ ತಂಡದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ