ಮೈಸೂರು ಜಿಲ್ಲೆಯಲ್ಲಿ ಮತ್ತೆ ಲಾಕ್ ಡೌನ್ ಎಂದ ಜಿಲ್ಲಾಧಿಕಾರಿ

ಶನಿವಾರ, 11 ಜುಲೈ 2020 (17:10 IST)
ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಮತ್ತೆ ಜಾರಿ ಮಾಡಲು ಸಿದ್ಧತೆಗಳು, ಚಿಂತನೆಗಳು ನಡೆಯುತ್ತಿವೆ ಎಂದು ಡಿಸಿ ತಿಳಿಸಿದ್ದಾರೆ.

ಕೊರೊನಾ ವೈರಸ್ ಪೀಡಿತರ ಸಂಖ್ಯೆ ಹಾಗೂ ಅದಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಕೊರೊನಾ ಓಟಕ್ಕೆ ಬ್ರೇಕ್ ಹಾಕಲು ನರಸಿಂಹರಾಜ ಕ್ಷೇತ್ರವನ್ನು ಮುಂಬೈನ ಧಾರಾವಿ ಕೊಳಗೇರಿಯಲ್ಲಿ ಮಾಡಿದಂತೆ ಲಾಕ್ ಡೌನ್ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಡಿಸಿ ಅಭಿರಾಮ್ ಜಿ.ಶಂರ್ ಹೇಳಿದ್ದಾರೆ.

ಲಾಕ್ ಡೌನ್ ಜಾರಿ ಮಾಡುವುದರಿಂದ ಕೊರೊನಾ ಹರಡುವಿಕೆಗೆ ತಡೆ ಹಾಗೂ ಸಾವಿನ ಪ್ರಮಾಣ ತಗ್ಗಿಸಬಹುದಾಗಿದೆ ಎಂದು ಡಿಸಿ ಹೇಳಿದ್ದಾರೆ.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ