ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ– ಎಚ್‌ಡಿಕೆ ವಿಶ್ವಾಸ

ಬುಧವಾರ, 3 ಜನವರಿ 2018 (20:21 IST)
ಕಾಂಗ್ರೆಸ್ ಹಾಗೂ ಬಿಜೆಪಿಯ ಜೊತೆ ಸೇರಿಕೊಂಡು ಸರ್ಕಾರ ರಚಿಸುವ ಉದ್ದೇಶವಿಲ್ಲ. ಸ್ವತಂತ್ರವಾಗಿ ಗೆದ್ದು ಜೆಡಿಎಸ್ ಸರ್ಕಾರ ರಚಿಸಬೇಕು ಎಂಬುದು ನನ್ನ ಉದ್ದೇಶವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಹಿರಿಯ ನಾಗರಿಕೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದ್ದು, ಕಡಿಮೆ ಸ್ಥಾನಗಳನ್ನು ಪಡೆದು ಸಮ್ಮಿಶ್ರ ಸರ್ಕಾರ ರಚನೆ ಮಾಡುವ ಉದ್ದೇಶವಿಲ್ಲ ಎಂದಿದ್ದಾರೆ.
 
ಮುಂದಿನ ಚುನಾವಣೆಯಲ್ಲಿ ಬಹುಮತ ಗಳಿಸಿ ಯಾರ ಹಂಗಿಲ್ಲದೆ ಆಡಳಿತ ನೀಡಬೇಕು ಎಂದು ಯೋಜಿಸಲಾಗಿದೆ. ಆದರೆ, ಸಮೀಕ್ಷೆಗಳು ಜೆಡಿಎಸ್‌ಗೆ 40ರಿಂದ 50ಸ್ಥಾನ ಬರಲಿವೆ ಎಂದು ಹೇಳಿವೆ. ಆದರೂ ಸಮೀಕ್ಷೆಗಳು ಹಾಗೂ ಜ್ಯೋತಿಷಿಗಳು ಏನೆ ಹೇಳಿದರೂ, ಜೆಡಿಎಸ್ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ