ಇನ್ನೆರೆಡು ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದಿಲ್ಲ

Sampriya

ಬುಧವಾರ, 4 ಸೆಪ್ಟಂಬರ್ 2024 (19:48 IST)
Photo Courtesy X
ಹಾವೇರಿ : ಇನ್ನೆರಡು ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ರಾಜಕೀಯ ಪರಿವರ್ತನೆ ಕಾಲ ನಡೆಯಲಿದೆ. ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಹಾಗಿದೆ. ಎಲ್ಲ ಹಂತದಲ್ಲೂ ಬದಲಾವಣೆ ಆಗುತ್ತದೆ. ರಾಜ್ಯದ ಚುಕ್ಕಾಣಿ ಬದಲಾವಣೆಯಾದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದರು.

ನಮ್ಮವರೇ ನಮಗೆ ಶತ್ರುಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ. ನಾವು ಹಿಂದೆಯೇ ಅವರಿಗೆ ಹೇಳಿದ್ದೇವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ