ಮರಳು ಮಾಫಿಯಾ ಯಾರ ಕೈಯಲ್ಲಿದೆ ಎನ್ನುವುದನ್ನು ಸರಕಾರ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದರು.
ಮರಳು ಕಳ್ಳಸಾಗಾಣೆದಾರರು ಗೂಂಡಾಗಳನ್ನು ಬಿಟ್ಟು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಹಲವಾರು ಬಾರಿ ಪೊಲೀಸ್ ಅಧಿಕಾರಿಗಳ ಹತ್ಯೆಗೆ ಯತ್ನ ನಡೆದಿದೆ. ಸರಕಾರ ಅಧಿಕಾರಿಗಳ ರಕ್ಷಣೆಗಾಗಿ ಯಾವ ಕ್ರಮ ಕೈಗೊಂಡಿದೆ ಎಂದು ಕಿಡಿಕಾರಿದರು.