ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅನ್ನಭಾಗ್ಯ ಇಲ್ಲವೇಕೆ- ಪರಮೇಶ್ವರ್

ಮಂಗಳವಾರ, 13 ಫೆಬ್ರವರಿ 2018 (21:13 IST)

ಅನ್ನಭಾಗ್ಯ ಯೋಜನೆ ವಿಷಯದಲ್ಲಿ ಕಾಂಗ್ರೆಸ್ ವಿರುದ್ಧ ಟೀಕಿಸುವ ಬಿಜೆಪಿಯವರು ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಈ ಯೋಜನೆ ಜಾರಿಗೊಳಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.

ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನಮ್ಮ ಅಕ್ಕಿಯನ್ನೇ ಅನ್ನಭಾಗ್ಯದ ಹೆಸರಿನಲ್ಲಿ ಕೊಡಲಾಗುತ್ತಿದೆ ಎನ್ನುತ್ತಾರೆ. ಹಾಗಾದರೆ ಅವರೇಕೆ ತಮ್ಮ ಪಕ್ಷ ಅಧಿಕಾರದಲ್ಲಿ ಇರುವ ರಾಜ್ಯಗಳಲ್ಲಿ ಏಕೆ ಜಾರಿಗೊಳಿಸಿಲ್ಲ ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ. ನಾವು ಭ್ರಷ್ಟಾಚಾರ ಮಾಡಿದ್ದರೆ ಜನರ ಮುಂದಿಡಲಿ ಎಂದು ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ