ಉತ್ತರ ಪ್ರದೇಶ ಅಂದ್ರೆ ಗೂಂಡಾ ರಾಜ್ಯ ಅನ್ನೋ ವಾತಾವರಣವಿತ್ತು : ಸುಮಲತಾ

ಗುರುವಾರ, 27 ಏಪ್ರಿಲ್ 2023 (10:44 IST)
ಮಂಡ್ಯ : ಒಂದು ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಜನ ಸಾಮಾನ್ಯರು ರಸ್ತೆಯಲ್ಲಿ ಓಡಾಡುವುದಕ್ಕೂ ಭಯಪಡುತ್ತಿದ್ದರು.
 
ವ್ಯಾಪಾರಿಗಳು ಸಂಪಾದನೆ ಮಾಡುವುದಕ್ಕಿಂತ ಹೆಚ್ಚಾಗಿ ರೌಡಿಗಳಿಗೆ ಮಾಮೂಲು ಕೊಟ್ಟು ಬೇಸತ್ತಿದ್ದರು ಎಂದು ಸಂಸದೆ ಸುಮಲತಾ ಅವರು ಉತ್ತರ ಪ್ರದೇಶದ ಹಿಂದಿನ ಸ್ಥಿತಿಯನ್ನ ಅವಲೋಕಿಸಿದರು.

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯ ಅನ್ನೋ ವಾತಾವರಣ ಇತ್ತು. ಆದ್ರೆ 2017ರ ನಂತರ ಅಲ್ಲಿನ ಜನ ಬಿಜೆಪಿಗೆ ಬೆಂಬಲ ನೀಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ