ಆದಾಯ ತೆರಿಗೆ ಇಲಾಖೆಯ ದಾಳಿ ರಾಜಕೀಯ ಪ್ರೇರಿತ ಅಲ್ಲ- ರಜನೀಶ್ ಕುಮಾರ್

ಶುಕ್ರವಾರ, 23 ಮಾರ್ಚ್ 2018 (07:43 IST)
ಬೆಂಗಳೂರು : ‘ಆದಾಯ ತೆರಿಗೆ ಇಲಾಖೆಯ ದಾಳಿ ರಾಜಕೀಯ ಪ್ರೇರಿತ ಅಲ್ಲ. ಇಂದು ನಮ್ಮ ಕಚೇರಿ ಮುಂದೆ ನಡೆದ ಪ್ರತಿಭಟನೆ ರಾಜಕೀಯ ಪ್ರೇರಿತ. ಅದರ ಬಗ್ಗೆ ನಾವು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲ್ಲ’ ಎಂದು ಐಟಿ ಇಲಾಖೆ ಮುಖ್ಯ ಆಯುಕ್ತ ರಜನೀಶ್ ಕುಮಾರ್ ಅವರು ಹೇಳಿದ್ದಾರೆ.


ಕಾಂಗ್ರೆಸ್ ನಾಯಕರ ಮೇಲೆ ಐಟಿ ಟಾರ್ಗೆಟ್ ಆರೋಪದ ಹಿನ್ನಲೆಯಲ್ಲಿ ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,’ದಾಳಿ ಹಿಂದೆ ಅನುಮಾನವಿದ್ದಲ್ಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಬಹುದು. ಧೈರ್ಯ ಇದ್ದವರು ನ್ಯಾಯಾಲಯದಲ್ಲಿ ಚಾಲೆಂಜ್ ಮಾಡಲಿ. ನಾವು ಯಾರನ್ನೂ ಟಾರ್ಗೆಟ್ ಮಾಡಿಲ್ಲ’ ಎಂದು ಸ್ಪಷ್ಟನೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ